ADVERTISEMENT

ಸಚಿವ ರಮೇಶ್ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ‌ಪ್ರಕರಣದ ವಿಚಾರಣೆಗೆ ತಡೆ

ಪಿಟಿಐ
Published 26 ಅಕ್ಟೋಬರ್ 2020, 12:50 IST
Last Updated 26 ಅಕ್ಟೋಬರ್ 2020, 12:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕೇಂದ್ರ ಸಚಿವರ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಅವರಿದ್ದ ಪೀಠವುಸೋಮವಾರ ಈ ಸಂಬಂಧ ಆದೇಶ ನೀಡಿತು.

ಸರ್ಕಾರದ ವಸತಿ ಬಳಕೆಗಾಗಿ ಮಾಜಿ ಮುಖ್ಯಮಂತ್ರಿಗಳು ಬಾಡಿಗೆ ಪಾವತಿಗೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ ಕಳೆದ ವರ್ಷ ನೀಡಿದ್ದ ಆದೇಶವನ್ನು ಪಾಲಿಸಿಲ್ಲ ಎಂದು ನ್ಯಾಯಾಂಗ ನಿಂದನೆ ಮೊಕದ್ದಮೆ ವಿಚಾರಣೆಗೆ ಚಾಲನೆ ನೀಡಲಾಗಿತ್ತು. ‌

ಅಧಿಕಾರದಿಂದ ಕೆಳಗಿಳಿಂದ ನಂತರ ಸರ್ಕಾರಿ ವಸತಿ ಬಳಸಿದ ಪೂರ್ಣ ಅವಧಿಗೆ ಅನ್ವಯಿಸಿ ಮಾರುಕಟ್ಟೆ ದರದಲ್ಲಿ ಬಾಡಿಗೆ ಪಾವತಿಸಬೇಕು ಎಂದು ಉತ್ತರಾಖಂಡ ಹೈಕೋರ್ಟ್ ಕಳೆದ ವರ್ಷ ಮಾಜಿ ಮುಖ್ಯಮಂತ್ರಿಗಳಿಗೆ ಆದೇಶಿಸಿತ್ತು. ಡೆಹ್ರಾಡೂನ್‌ ಮೂಲದ ಸೇವಾ ಸಂಸ್ಥೆಯೊಂದು ಈ ಕುರಿತು ಅರ್ಜಿಯನ್ನು ದಾಖಲಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.