ADVERTISEMENT

ರಾಮ ಸೇತು| ಸುಬ್ರಮಣಿಯನ್ ಸ್ವಾಮಿ ಪಿಐಎಲ್‌ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಪಿಟಿಐ
Published 16 ಫೆಬ್ರುವರಿ 2023, 11:16 IST
Last Updated 16 ಫೆಬ್ರುವರಿ 2023, 11:16 IST
.
.   

ನವದೆಹಲಿ: ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಗೆ ಸುಪ್ರೀಂ ಕೋರ್ಟ್‌ ಗುರುವಾರ ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು ಇಲ್ಲಿಯವರೆಗೆ ರಾಮ ಸೇತು ವಿಷಯದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂಬುದನ್ನು ಗಮನಿಸಿದ ಬಳಿಕ ಸುಬ್ರಮಣಿಯನ್‌ ಅವರು ಸಲ್ಲಿಸಿರುವ ಪಿಐಎಲ್‌ ಅನ್ನು ವಿಚಾರಣೆಗೆ ಪಟ್ಟಿ ಮಾಡಲು ಸಮ್ಮತಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT