ನವದೆಹಲಿ: ಮರಣದಂಡನೆ ಪ್ರಕರಣಗಳಲ್ಲಿ ಸಂತ್ರಸ್ತ ಮತ್ತು ಸಮಾಜ ಕೇಂದ್ರಿತ ಮಾರ್ಗಸೂಚಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.
ಮರಣದಂಡನೆಯನ್ನು ವಿಳಂಬ ಗೊಳಿಸಲು ಅಪರಾಧಿಗಳು ಕಾನೂನು ಪ್ರಕ್ರಿಯೆಗಳನ್ನು ಬಳಸಿಕೊಳ್ಳುವುದನ್ನು ತಡೆಯಲು ಮಾರ್ಗಸೂಚಿಯನ್ನು ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
‘2014ರ ತೀರ್ಪಿನಲ್ಲಿ ನೀಡಲಾದ ಮಾರ್ಗಸೂಚಿಗಳು ಆರೋಪಿ ಕೇಂದ್ರಿತವಾಗಿದೆ. ಸಮಾಜ ಮತ್ತು ಸಂತ್ರಸ್ತರ ಹಿತಾಸಕ್ತಿ ಅದರಲ್ಲಿ ಇಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.