ADVERTISEMENT

ಜಮ್ಮು ಕಾಶ್ಮೀರ ವಿಶೇಷಾಧಿಕಾರ ರದ್ದತಿ: ‘ಸುಪ್ರೀಂ’ ಆದೇಶ ನಾಳೆ

ಪಿಟಿಐ
Published 29 ಫೆಬ್ರುವರಿ 2020, 19:45 IST
Last Updated 29 ಫೆಬ್ರುವರಿ 2020, 19:45 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ರದ್ದುಗೊಳಿಸಿದ ಹಾಗೂ ರಾಜ್ಯದ ವಿಭಜನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಏಳು ಮಂದಿ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಒಪ್ಪಿಸುವ ವಿಚಾರವಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಆದೇಶ ಪ್ರಕಟಿಸುವ ನಿರೀಕ್ಷೆ ಇದೆ.

ನ್ಯಾಯಮೂರ್ತಿಗಳಾದ ಎನ್‌.ವಿ. ರಮಣ, ಸಂಜಯ್‌ಕೃಷ್ಣ ಕೌಲ್‌, ಆರ್‌. ಸುಭಾಷ್‌ ರೆಡ್ಡಿ, ಬಿ.ಆರ್‌. ಗವಾಯ್‌ ಹಾಗೂ ಸೂರ್ಯಕಾಂತ್‌ ಅವರನ್ನೊಳಗೊಂಡ ಪೀಠವು ಕಳೆದ ಜನವರಿ 23ರಂದು ಪ್ರಕರಣದ ವಿಚಾರಣೆಯನ್ನು ಮುಗಿಸಿದ್ದು, ಮಾರ್ಚ್‌ 2ರಂದು ಆದೇಶವನ್ನು ಪ್ರಕಟಿಸಲಿದೆ.

ಸರ್ಕಾರದ ಪರವಾಗಿ ವಾದಿಸಿದ್ದ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌, ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಹಾಗೂ ಇತರ ಕೆಲವು ಹಿರಿಯ ವಕೀಲರು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಜಮ್ಮು ಕಾಶ್ಮೀರ ಹೈಕೋರ್ಟ್‌ ವಕೀಲರ ಸಂಘ ಹಾಗೂ ಕೆಲವು ವಕೀಲರು ವಿಸ್ತೃತ ಪೀಠಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.