ADVERTISEMENT

ಗಲಭೆಕೋರರ ಆಸ್ತಿ ನೆಲಸಮ ವಿರುದ್ಧದ ಅರ್ಜಿ: ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

ಪಿಟಿಐ
Published 10 ಆಗಸ್ಟ್ 2022, 16:08 IST
Last Updated 10 ಆಗಸ್ಟ್ 2022, 16:08 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ:ಗಲಭೆ ಪ್ರಕರಣಗಳಲ್ಲಿ ಭಾಗಿಯಾದ ಆಪಾದಿತ ಆರೋಪಿಗಳ ಆಸ್ತಿಗಳನ್ನು ಮತ್ತಷ್ಟು ನೆಲಸಮಗೊಳಿಸದಂತೆ ವಿವಿಧ ರಾಜ್ಯಗಳಿಗೆ ನಿರ್ದೇಶನ ನೀಡಲು ಕೋರಿ ಜಮಿಯತ್ ಉಲೆಮಾ-ಐ-ಹಿಂದ್ಮುಸ್ಲಿಂ ಸಂಘಟನೆ ಮತ್ತು ಇತರರುಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಪಿ.ಎಸ್‌. ನರಸಿಂಹ ಅವರಿದ್ದ ಪೀಠವು, ಸಿಪಿಐಎಂ ಬೃಂದಾ ಕಾರಟ್‌ ಸೇರಿ ಇತರ ಐವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿವಿಧ ರಾಜ್ಯಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವ ಸರ್ಕಾರಗಳ ಕ್ರಮಕ್ಕೆ ಸಂಬಂಧಿಸಿ ಯಾವುದೇ ಮಧ್ಯಂತರ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ಜುಲೈ 13ರಂದುನಿರಾಕರಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.