ADVERTISEMENT

ಜನಪ್ರತಿನಿಧಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ: ಇಂದು ’ಸುಪ್ರೀಂ’ ತೀರ್ಪು

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 1:45 IST
Last Updated 3 ಜನವರಿ 2023, 1:45 IST
   

ನವದೆಹಲಿ: ಸಾರ್ವಜನಿಕ ಬದುಕಿನಲ್ಲಿರುವ ಜನಪ್ರತಿನಿಧಿಗಳ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲೆ ಹೆಚ್ಚಿನ ನಿರ್ಬಂಧ ವಿಧಿಸಬಹುದೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ.

ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣಿಯನ್‌, ಬಿ.ವಿ. ನಾಗರತ್ನ ಅವರಿರುವ ಪೀಠವು, ಈ ನಿಟ್ಟಿನಲ್ಲಿ ಕೆಲವು ಸಾಮಾನ್ಯ ಮಾರ್ಗಸೂಚಿಗಳನ್ನು ರೂಪಿಸಬಹುದೇ ಎಂದು ತಿಳಿಸಲಿದೆ.

ಬುಲಂದರ್‌ಶಹರ್‌ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂತ್ರಸ್ತರ ಬಗ್ಗೆ ಉತ್ತರಪ್ರದೇಶ ಸರ್ಕಾರದ ಆಗಿನ ಸಚಿವ ಆಜಂಖಾನ್ ನೀಡಿದ ಹೇಳಿಕೆಗೆ ಸಂಬಂಧಿಸಿದ ಪ್ರಕರಣವಿದು. ಈ ಪ್ರಕರಣದಲ್ಲಿ ಆಜಂಖಾನ್‌ ಅವರು ಕ್ಷಮೆಯಾಚಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.