ನವದೆಹಲಿ: ಮಾಧ್ಯಮಗಳ ಕಾರ್ಯ ನಿರ್ವಹಣೆಗೆ ಸಂಬಂಧಿಸಿದ ಕಾನೂನಿನ ಚೌಕಟ್ಟಿನ ಪರಿಶೀಲನೆಗೆ ಸಮಿತಿ ಯೊಂದನ್ನು ರಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಜ. 25) ಕೈಗೆತ್ತಿಕೊಳ್ಳಲಿದೆ.
ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
ಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯ ಮೂರ್ತಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚಿಸುವಂತೆ ಕೋರಿ ಚಿತ್ರ ನಿರ್ಮಾಪಕ ನೀಲೇಶ್ ನವಲಖಾ, ಸಿವಿಲ್ ಎಂಜಿನಿಯರ್ ನಿತಿನ್ ಮೇಮಾನೆ ಜಂಟಿಯಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
‘ಮುದ್ರಣ, ಎಲೆಕ್ಟ್ರಾನಿಕ್ ಮಾಧ್ಯಮ ಗಳ ವಿರುದ್ಧದ ದೂರುಗಳ ವಿಚಾರಣೆ ಗಾಗಿ ಮಾಧ್ಯಮ ನಾಯಮಂಡಳಿ ಸ್ಥಾಪಿಸಬೇಕು’ ಎಂದು ಕೋರಿದ್ದರು.
‘ಮಾಧ್ಯಮ ಕೂಡ ಒಂದು ವ್ಯವಹಾರ. ಅದರ ಕಾರ್ಯ, ವ್ಯಾಪ್ತಿ ಹಾಗೂ ಪ್ರಭಾವದಿಂದಾಗಿ ಮಾಧ್ಯಮ ಶಕ್ತಿಯುತವೂ ಆಗಿದೆ. ಹೀಗಾಗಿ, ಸಂವಿಧಾನದಲ್ಲಿ ನೀಡಲಾಗಿರುವ ನಿಯ ಮಗಳ ಅನುಸಾರವೇ ಅದರ ನಿಯಂತ್ರಣ ಅಗತ್ಯ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.