
ಪ್ರಜಾವಾಣಿ ವಾರ್ತೆ
ತಿರುವನಂತಪುರ: ನೂತನವಾಗಿ ಉದ್ಘಾಟನೆಗೊಂಡ ಎರ್ನಾಕುಳಂ–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಶಾಲಾ ಮಕ್ಕಳಿಂದ ಆರ್ಎಸ್ಎಸ್ ಗೀತೆಯನ್ನು ಹಾಡಿಸಲಾಗಿದೆ ಎಂದು ಹೇಳಲಾಗಿದ್ದು, ಈ ನಡೆ ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಂಡಿಸಿದ್ದಾರೆ.
ರೈಲಿನಲ್ಲಿ ವಿದ್ಯಾರ್ಥಿಗಳು ಆರ್ಎಸ್ಎಸ್ ಗೀತೆ ಹಾಡಿರುವ ದೃಶ್ಯ ಟಿ.ವಿ ಚಾನೆಲ್ಗಳಲ್ಲಿ ಪ್ರಸಾರವಾಗಿದೆ.
‘ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಸಂವಿಧಾನಾತ್ಮಕ ನೀತಿಗಳನ್ನು ಉಲ್ಲಂಘಿಸಲಾಗಿದೆ. ಸಂಘ ಪರಿವಾರವು ತನ್ನ ಕೋಮು ರಾಜಕೀಯದ ಪ್ರಚಾರಕ್ಕಾಗಿ ಅತಿದೊಡ್ಡ ಸಾರ್ವಜನಿಕ ವಲಯವಾದ ರೈಲ್ವೆಯನ್ನು ಬಳಸಿಕೊಂಡಿರುವುದು ಸ್ವೀಕಾರಾರ್ಹವಲ್ಲ’ ಎಂದು ಹರಿಹಾಯ್ದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.