ADVERTISEMENT

ಕೇರಳ: ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ, ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಪಿಟಿಐ
Published 28 ಡಿಸೆಂಬರ್ 2021, 14:16 IST
Last Updated 28 ಡಿಸೆಂಬರ್ 2021, 14:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಾಲಕ್ಕಾಡ್‌: ಆರ್‌ಎಸ್‌ಎಸ್‌ ಕಾರ್ಯಕರ್ತ ಸಂಜಿತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಚೆರುಪುಳಶ್ಶೇರಿಯಿಂದ ಎಸ್‌ಡಿಪಿಐ ಕಾರ್ಯಕರ್ತನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

‘ಬಂಧಿತ ಆರೋಪಿಯು ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ವಿಶ್ವನಾಥ್‌ ತಿಳಿಸಿದ್ದಾರೆ. ಆರೋಪಿಯ ಗುರುತನ್ನು ತನಿಖಾ ತಂಡ ಬಹಿರಂಗಪಡಿಸಿಲ್ಲ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.