ADVERTISEMENT

ಜಮೀನು ವ್ಯಾಜ್ಯ: ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿ

ಹೆದ್ದಾರಿಗಳ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾರ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2022, 13:32 IST
Last Updated 18 ಡಿಸೆಂಬರ್ 2022, 13:32 IST
ನಿತಿನ್‌ ಗಡ್ಕರಿ
ನಿತಿನ್‌ ಗಡ್ಕರಿ   

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ನೀಡುವ ಪರಿಹಾರಕ್ಕೆ ಸಂಬಂಧಿಸಿ ಕರ್ನಾಟಕದಲ್ಲಿ ಗರಿಷ್ಠ ಸಂಖ್ಯೆಯ ವ್ಯಾಜ್ಯಗಳಿದ್ದು, ರಾಜ್ಯವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

ಪರಿಹಾರಕ್ಕೆ ಸಂಬಂಧಿಸಿ ದೇಶದಲ್ಲಿ ಒಟ್ಟು 1,74,387 ವ್ಯಾಜ್ಯಗಳಿವೆ. ಈ ಪೈಕಿ ಕರ್ನಾಟಕದಲ್ಲಿ 23,501 ಪ್ರಕರಣಗಳಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಗರಿಷ್ಠ ಸಂಖ್ಯೆಯ 37,327 ವ್ಯಾಜ್ಯಗಳು ಮಹಾರಾಷ್ಟ್ರದಲ್ಲಿದ್ದು, ದೇಶದಲ್ಲಿ ಈ ರಾಜ್ಯ ಮೊದಲ ಸ್ಥಾನದಲ್ಲಿದೆ.ಪಂಜಾಬ್‌ನಲ್ಲಿ 22,877 ಪ್ರಕರಣಗಳು ಬಾಕಿ ಇದ್ದು, ಮೂರನೇ ಸ್ಥಾನದಲ್ಲಿದೆ.

ADVERTISEMENT

ಭೂ ಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಹಂತದಲ್ಲಿ ಕೆಲ ಪ್ರಕರಣಗಳಲ್ಲಿ ದೂರುದಾರರು ಹೈಕೋರ್ಟ್‌ ಮೆಟ್ಟಿಲೇರುತ್ತಾರೆ. ಇನ್ನೂ ಕೆಲ ಪ್ರಕರಣಗಳು ಸುಪ್ರೀಂಕೋರ್ಟ್‌ಗೂ ಹೋಗುತ್ತವೆ. ಹೀಗಾಗಿ ಪರಿಹಾರ ವಿತರಣೆಯಲ್ಲಿ ಆಗುತ್ತಿರುವ ಈ ವಿಳಂಬವನ್ನು ತಪ್ಪಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

‘ಈ ವಿಷಯದಲ್ಲಿ ಅಗತ್ಯ ಕಂಡುಬಂದಲ್ಲಿ, ಎಲ್ಲ ಭಾಗಿದಾರರೊಂದಿಗೆ ಚರ್ಚಿಸಿ ಕಾನೂನಿಗೆ ತಿದ್ದುಪಡಿ ತರಲಾಗುವುದು. ಭೂಮಿ ಕಳೆದುಕೊಂಡವರಿಗೆ ತ್ವರಿತವಾಗಿ ಹಾಗೂ ಪಾರದರ್ಶಕ ವಿಧಾನದ ಮೂಲಕ ಪರಿಹಾರ ಸಿಗುವಂತಾಗಬೇಕು ಎಂಬುದೇ ನಮ್ಮ ಉದ್ದೇಶ’ ಎಂದು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.