ತಿರುಚಿರಾಪಳ್ಳಿ (ತಮಿಳುನಾಡು): ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅಧಿಕಾರಿಗಳಿಗೆ ಸೋಮವಾರ ಬೆದರಿಕೆ ಕರೆಬಂದಿದೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಭದ್ರತಾ ಸಿಬ್ಬಂದಿಯು ತಿರುಚಿರಾಪಳ್ಳಿ ಮತ್ತು ಚೆನ್ನೈನ ವಿಮಾನ ನಿಲ್ದಾಣಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು ಎಂದು ಪೊಲೀಸರು ತಿಳಿಸಿದರು.
‘ವಿಮಾನ ನಿಲ್ದಾಣದಿಂದ 200 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಗೊಳಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಶ್ವಾನ ಮತ್ತು ಲೋಹ ಪರಿಶೋಧಕ ಯಂತ್ರಗಳ ಸಹಾಯದಿಂದಸಿಐಎಸ್ಎಫ್ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.