ADVERTISEMENT

ಬಾಂಬ್‌ ಬೆದರಿಕೆ: ಉ. ಪ್ರದೇಶದ 9 ಜಿಲ್ಲೆಗಳ ರೈಲು ನಿಲ್ದಾಣಗಳಲ್ಲಿ ಭದ್ರತೆ ಬಿಗಿ

ಪಿಟಿಐ
Published 10 ನವೆಂಬರ್ 2021, 11:11 IST
Last Updated 10 ನವೆಂಬರ್ 2021, 11:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೀರತ್‌: ಉತ್ತರ ಪ್ರದೇಶದ ಮೀರತ್ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ರೈಲ್ವೆ ನಿಲ್ದಾಣಗಳು ಮತ್ತು ದೇವಾಲಯಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿರುವ ಕಾರಣ, ಎಲ್ಲ ಕಡೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ನವೆಂಬರ್‌ 11 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೀರತ್‌ಗೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮೊದಲೇ ಈ ರೀತಿಯ ಪತ್ರವೊಂದು ಬಂದಿದೆ ಎಂದು ಮೀರತ್‌ ನಗರ ರೈಲ್ವೆ ನಿಲ್ದಾಣದ ಉಪ ಪೊಲೀಸ್‌ ವರಿಷ್ಠಾಧಿಕಾರಿ ಸುದೇಶ್‌ ಕುಮಾರ್‌ ಗುಪ್ತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT