ADVERTISEMENT

ದೇಶದ್ರೋಹ ಕಾನೂನು ರದ್ದು ಇಲ್ಲ: ಕೇಂದ್ರ

ಪಿಟಿಐ
Published 5 ಫೆಬ್ರುವರಿ 2019, 19:02 IST
Last Updated 5 ಫೆಬ್ರುವರಿ 2019, 19:02 IST

ನವದೆಹಲಿ: ದೇಶದ್ರೋಹ ಕಾನೂನು ರದ್ದುಪಡಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕಾನೂನಿನ ಅಡಿಯಲ್ಲಿನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದೆ.

ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹನ್ಸರಾಜ್‌ ಅಹಿರ್‌, ‘ಬ್ರಿಟಿಷರ ಕಾಲದ ಈ ಕಾನೂನಿಗೆ ತಿದ್ದುಪಡಿ ಮಾಡುವ ಪ್ರಸ್ತಾವವನ್ನು ಸರ್ಕಾರ ಸದ್ಯಕ್ಕೆ ಪರಿಗಣಿಸಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

‘ಕಾನೂನುಗಳಿಗೆ ತಿದ್ದುಪಡಿ ಮಾಡುವುದು ನಿರಂತರ ಪ್ರಕ್ರಿಯೆ. ರಾಜ್ಯ ಸರ್ಕಾರಗಳು ಸೇರಿದಂತೆ ತಜ್ಞರ ಜತೆ ಸಮಾಲೋಚನೆ ಮಾಡಿ ತಿದ್ದುಪಡಿ ಮಾಡಲಾಗುತ್ತಿದೆ’ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.