ಹಿಸಾರ್/ಹರಿಯಾಣ:ಎರಡು ಅಪರಾಧ ಪ್ರಕರಣಗಳಲ್ಲಿ ಹರಿಯಾಣದ ಸ್ವಯಂಘೋಷಿತ ದೇವಮಾನವ ರಾಮ್ಪಾಲ್ ದೋಷಿಯಾಗಿದ್ದಾರೆಎಂದು ಹೈಕೋರ್ಟ್ ತೀರ್ಪು ನೀಡಿದೆ.
ಬರ್ವಾಲಾದ ಸತ್ಲೋಕ್ ಆಶ್ರಮದ ಮುಖ್ಯಸ್ಥರಾಮ್ಪಾಲ್ ಅವರ ಶಿಕ್ಷೆಯ ಪ್ರಮಾಣವನ್ನು ಅ.16ರಂದು ಪ್ರಕಟಿಸಲಾಗುವುದು.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹಿಸಾರ್ಜಿಲ್ಲೆಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹರಿಯಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.