ADVERTISEMENT

ನಟ ನಂದಮೂರಿ ಹರಿಕೃಷ್ಣ ಮೃತದೇಹದ ಜತೆ ಸೆಲ್ಫಿ, ಆಸ್ಪತ್ರೆ ಸಿಬ್ಬಂದಿ ವಜಾ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 9:41 IST
Last Updated 1 ಸೆಪ್ಟೆಂಬರ್ 2018, 9:41 IST
 ನಂದಮೂರಿ ಹರಿಕೃಷ್ಣ ಅವರ ಮೃತದೇಹದ ಜತೆ ಸೆಲ್ಫಿ (ಕೃಪೆ: ಫೇಸ್‍ಬುಕ್)
ನಂದಮೂರಿ ಹರಿಕೃಷ್ಣ ಅವರ ಮೃತದೇಹದ ಜತೆ ಸೆಲ್ಫಿ (ಕೃಪೆ: ಫೇಸ್‍ಬುಕ್)   

ಹೈದರಾಬಾದ್: ತೆಲುಗು ನಟ ಮತ್ತು ಟಿಡಿಪಿ ಮುಖಂಡ ನಂದಮೂರಿ ಹರಿಕೃಷ್ಣ ಅವರ ಮೃತದೇಹದ ಜತೆ ಸೆಲ್ಫಿ ಕ್ಲಿಕ್ಕಿಸಿದ ಕಮಿನೇನಿ ಆಸ್ಪತ್ರೆಯ ನಾಲ್ವರು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ ಅವರ ಪುತ್ರ ಹರಿಕೃಷ್ಣ (62) ಆಂಧ್ರಪ್ರದೇಶದ ನಲ್ಗೊಂಡ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.ಅಭಿಮಾನಿಯ ಪುತ್ರನ ಮದುವೆಯಲ್ಲಿ ಪಾಲ್ಗೊಳ್ಳಲು ಹೈದರಾಬಾದ್‌ನಿಂದ ನಲ್ಲೂರಿಗೆ ಒಬ್ಬರೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ನಲ್ಗೊಂಡಾ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿತ್ತು.

ಮೃತದೇಹದ ಜತೆಗಿನ ಸೆಲ್ಫಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು.

ADVERTISEMENT

ಸಿಬ್ಬಂದಿಗಳ ಪರವಾಗಿ ಕ್ಷಮೆಯಾಚಿಸಿದ ಆಸ್ಪತ್ರೆಯ ವಕ್ತಾರ ರವಿ, ಮೃತದೇಹದ ಜತೆ ಸೆಲ್ಫಿ ಕ್ಲಿಕ್ಕಿಸಿದ ನಾಲ್ವರು ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹರಿಕೃಷ್ಣ ಅವರಿಗೆ ಅಗೌರವ ತೋರಿಸಿದ ಸಿಬ್ಬಂದಿಗಳ ವರ್ತನೆಯನ್ನು ಖಂಡಿಸಿ ಈ ಕ್ರಮಕೈಗೊಳ್ಳಗಾಗಿದೆಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.