ಮುಂಬೈ: ಚೀನಾ ಮೂಲದ 59 ಮೊಬೈಲ್ ಆ್ಯಪ್ಗಳನ್ನು ನಿಷೇದಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಶಿವಸೇನೆ`ಡಿಜಿಟಲ್ ಸ್ಟ್ರೈಕ್’ ಎಂದು ಬಣ್ಣಿಸಿದೆ. ಅಲ್ಲದೆ, ಈ ಎಲ್ಲ ಆ್ಯಪ್ಗಳು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹವೇ ಆಗಿದ್ದರೆ ಹಲವು ವರ್ಷಗಳಿಂದ ಅವು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದುದಾದರೂ ಹೇಗೆ ಎಂದೂ ಪ್ರಶ್ನಿಸಿದೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಕುರಿತ ಬರೆದಿರುವ ಸಂಪಾದಕೀಯದಲ್ಲಿ, ‘ರಾಷ್ಟ್ರೀಯ ಭದ್ರತೆಗೆ ಈ ಆ್ಯಪ್ ಗಳು ಧಕ್ಕೆ ತರುತ್ತಿವೆ ಎಂಬ ಅಂಶ ಕೇಂದ್ರ ಸರ್ಕಾರಕ್ಕೆ ಮನವರಿಕೆ ಆದುದು ಯಾವಾಗ ಎಂದು ತಿಳಿಸಬೇಕು’ ಎಂದಿದೆ.
ಆ್ಯಪ್ಗಳನ್ನು ನಿಷೇಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇಂಟರ್ ನೆಟ್ ಬಳಕೆದಾರರ ಹಿತಾಸಕ್ತಿಯನ್ನು ರಕ್ಷಿಸಿದ್ದಾರೆ. ಈ ಧೈರ್ಯವನ್ನು ಮೆಚ್ಚಲೇಬೇಕು ಎಂದು ಶಿವಸೇನೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.