ಮುಂಬೈ: ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ಸೌಜನ್ಯದ ಭೇಟಿ ಎಂದು ಮೂಲಗಳು ಹೇಳಿವೆ. ಆದರೆ, ಸರ್ಕಾರ ರಚನೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಒಮ್ಮತಕ್ಕೆ ಬರದಿರುವ ಕಾರಣ ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದಿದೆ.
ಗುರುವಾರ ಬೆಳಿಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ನ ಅಧ್ಯಕ್ಷ ಬಾಳಾಸಾಹೇಬ್ ತೋರಟ್, ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್ ಮತ್ತು ಪೃಥ್ವಿರಾಜ್ ಚವಾಣ್ ಅವರು ಶರದ್ ಪವಾರ್ ಅವರನ್ನು, ಅವರ ಮನೆಯಲ್ಲಿ ಭೇಟಿ ಮಾಡಿದ್ದರು.ಸರ್ಕಾರ ರಚನೆಗೆ ಹಕ್ಕು ಮಂಡನೆಯಲ್ಲಿ ವಿಳಂಬ ಆಗುತ್ತಿರುವ ಸಂಬಂಧ ಕಾಂಗ್ರೆಸ್ ಮತ್ತು ಎನ್ಸಿಪಿಯ ನಡೆ ಏನಾಗಿರಬೇಕು ಎಂಬುದನ್ನು ಈ ಭೇಟಿ ವೇಳೆ ಚರ್ಚಿಸಲಾಗಿದೆ.
ಶಿಂಧೆ ಶಾಸಕಾಂಗ ಪಕ್ಷದ ನಾಯಕ: ಶಿವಸೇನಾ ಶಾಸಕಾಂಗ ಪಕ್ಷದ ನಾಯಕ ನಾಗಿ ಏಕನಾಥ್ ಶಿಂಧೆ ಅವರನ್ನು ಆಯ್ಕೆ ಮಾಡಲಾಗಿದೆ. ಆದಿತ್ಯ ಠಾಕ್ರೆ, ಶಿಂಧೆ ಅವರು ಇದ್ದಶಿವಸೇನಾ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.