ADVERTISEMENT

ವಿಧಾನಸಭೆ ಚುನಾವಣೆ| ತ.ನಾಡು, ಪುದುಚೇರಿಗೆ ನಾಳೆ ಚುನಾವಣಾ ಆಯೋಗದ ಅಧಿಕಾರಿಗಳ ಭೇಟಿ

ಪಿಟಿಐ
Published 20 ಡಿಸೆಂಬರ್ 2020, 11:14 IST
Last Updated 20 ಡಿಸೆಂಬರ್ 2020, 11:14 IST
   

ನವದೆಹಲಿ: 2021 ರ ಮಧ್ಯೆದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಚುನಾವಣಾ ಆಯೋಗವು ಹಿರಿಯ ಅಧಿಕಾರಿಗಳನ್ನು ತಮಿಳುನಾಡು ಮತ್ತು ಪುದುಚೇರಿಗೆ ಸೋಮವಾರ ಕಳುಹಿಸಲಿದೆ.

ಚುನಾವಣಾ ಆಯೋಗದ ಪ್ರಧಾನ ಕಾರ್ಯದರ್ಶಿ ಉಮೇಶ್‌ ಸಿನ್ಹಾ ಅವರು ಸೋಮವಾರ ಮತ್ತು ಮಂಗಳವಾರ ತಮಿಳುನಾಡಿನಲ್ಲಿ ಇರಲಿದ್ದಾರೆ. ಬುಧವಾರ ಪುದುಚೇರಿಗೆ ತೆರಳಲಿದ್ದಾರೆ. ಈ ವೇಳೆ ಅವರು ಚುನಾವಣಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಕಳೆದ ವಾರ ಉಪ ಚುನಾವಣಾ ಆಯುಕ್ತ ಸುದೀಪ್ ಜೈನ್ ಅವರು ಇದೇ ರೀತಿ ಚುನಾವಣಾ ಸಿದ್ಧತೆಗಳನ್ನು ನೋಡಿಕೊಳ್ಳಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು.

ADVERTISEMENT

ಮುಂದಿನ ವರ್ಷ ಏಪ್ರಿಲ್‌ ಮತ್ತು ಜೂನ್‌ ತಿಂಗಳಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.