ನವದೆಹಲಿ: ಕೇಂದ್ರ ಸರ್ಕಾರವು ಜಮ್ಮು ಮತ್ತು ಶ್ರೀನಗರದಲ್ಲಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಪ್ರತ್ಯೇಕ ಪೀಠಗಳನ್ನು ರಚಿಸಿ ಆದೇಶಿಸಿದೆ.
ಇದು ಕಣಿವೆ ಪ್ರದೇಶದಲ್ಲಿನ ಕೇಂದ್ರ ಸರ್ಕಾರಿ ನೌಕರರ ಸೇವಾ ವಿಷಯಗಳ ವ್ಯಾಜ್ಯಗಳ ವಿಚಾರಣೆ ನಡೆಸಲಿದೆ.
ಕಳೆದ ವರ್ಷದ ಮೇ ತಿಂಗಳಿನಲ್ಲಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರತ್ಯೇಕ ಸಿಎಟಿ ಪೀಠ ರಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.