ADVERTISEMENT

ಚಂದ್ರಬಾಬು ನಾಯ್ಡು ರೋಡ್‌ ಶೋ | ಕಾಲ್ತುಳಿತ: ಏಳು ಮಂದಿ ಸಾವು

ಚಂದ್ರಬಾಬು ನಾಯ್ಡು ರೋಡ್‌ ಶೋನಲ್ಲಿ ಅವಘಡ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 19:17 IST
Last Updated 28 ಡಿಸೆಂಬರ್ 2022, 19:17 IST
‌ಆಂಧ್ರ ಪ್ರದೇಶದ  ನೆಲ್ಲೂರ್‌ನ ಕಂದಕೂರ್‌ನಲ್ಲಿ ಬುಧವಾರ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್‌ಶೋನಲ್ಲಿ ಕಾಲ್ತುಳಿತ ಸಂಭವಿಸಿದ ವೇಳೆ ಜನ ಗಾಬರಿಗೊಂಡರು  –ಪಿಟಿಐ ಚಿತ್ರ
‌ಆಂಧ್ರ ಪ್ರದೇಶದ  ನೆಲ್ಲೂರ್‌ನ ಕಂದಕೂರ್‌ನಲ್ಲಿ ಬುಧವಾರ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್‌ಶೋನಲ್ಲಿ ಕಾಲ್ತುಳಿತ ಸಂಭವಿಸಿದ ವೇಳೆ ಜನ ಗಾಬರಿಗೊಂಡರು  –ಪಿಟಿಐ ಚಿತ್ರ   

ಹೈದರಾಬಾದ್‌:ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬುಧವಾರ ಸಂಜೆ ಕಂದಕೂರ್ ಪಟ್ಟಣದಲ್ಲಿ ನಡೆಸಿದ ರೋಡ್ ಶೋನಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.

ರ್‍ಯಾಲಿಯಲ್ಲಿ ಭಾಗವಹಿಸಲು ಬಂದಿದ್ದ ಏಳು ಟಿಡಿಪಿ ಬೆಂಬಲಿಗರು ಒಳಚರಂಡಿ ಕಾಲುವೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

ನಂತರ ಎನ್‌ಟಿಆರ್‌ ವೃತ್ತದಲ್ಲಿ ನಡೆದ ರ್‍ಯಾಲಿಯಲ್ಲಿ ಟಿಡಿಪಿ ವತಿಯಿಂದ ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರವನ್ನು ನಾಯ್ಡು ಘೋಷಿಸಿದರು.

ADVERTISEMENT

‘ಎನ್‌ಟಿಆರ್‌ಟ್ರಸ್ಟ್ ಮೂಲಕ ಮೃತರ ಕುಟುಂಬದವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಾಗುವುದು’ ಎಂದು ನಾಯ್ಡು ಹೇಳಿದರು.

ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.