ಸೇತುವೆ ಕುಸಿತ
(ಸಾಂದರ್ಭಿಕ ಚಿತ್ರ – ಪಿಟಿಐ)
ಮೊರೈನಾ (ಮಧ್ಯಪ್ರದೇಶ): ಕುವಾರಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿದು, ಐವರು ಕಾರ್ಮಿಕರು ಮಂಗಳವಾರ ಗಾಯಗೊಂಡಿದ್ದಾರೆ.
ಶತಮಾನದಷ್ಟು ಹಳೆಯದಾದ ರೈಲ್ವೆ ಸೇತುವೆಯನ್ನು ಕಳಚುವ ಪ್ರಕ್ರಿಯೆಯಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ.
ರೈಲ್ವೆ ಹಳಿಯನ್ನು ನ್ಯಾರೋ ಗೇಜ್ನಿಂದ ಬ್ರಾಡ್ ಗೇಜ್ಗೆ ಪರಿವರ್ತಿಸಲಾಗುತ್ತಿದ್ದು, ಸೇತುವೆಯನ್ನು ಆ ಸಲುವಾಗಿ ಕಳಚುವ ಕಾಮಗಾರಿ ನಡೆಸಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ಯಾಸ್ ಕಟರ್ ಬಳಸಿ ಸೇತುವೆಯ ಉಕ್ಕಿನ ಭಾಗವನ್ನು ತುಂಡರಿಸುವ ಕಾರ್ಯದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಅವಘಡ ಸಂಭವಿಸಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.