ADVERTISEMENT

ತಮಿಳುನಾಡು: ವಿರುಧ್‌ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪಿಟಿಐ
Published 17 ಫೆಬ್ರುವರಿ 2024, 14:58 IST
Last Updated 17 ಫೆಬ್ರುವರಿ 2024, 14:58 IST
<div class="paragraphs"><p>ತಮಿಳುನಾಡು: ವಿರುಧ್‌ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ</p></div>

ತಮಿಳುನಾಡು: ವಿರುಧ್‌ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ

   

ವಿರುಧ್‌ನಗರ, ತಮಿಳುನಾಡು: ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಆರು ಪುರುಷರು ಇದ್ದಾರೆ.

ADVERTISEMENT

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ವೆಂಬಾಕೊಟ್ಟೈ ತಾಲ್ಲೂಕಿನ ಕುಂಡಾಯಿರುಪ್ಪು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಏಕಾಏಕಿ ಸ್ಪೋಟ ಸಂಭವಿಸಿತ್ತು.

ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡು ಸರ್ಕಾರ ಮೃತರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಸ್ಥಳದಲ್ಲಿ ಭಾರಿ ಪ್ರಮಾಣದ ರಸಾಯನಿಕಗಳನ್ನು ಸಂಗ್ರಹಿಸಲಾಗಿದ್ದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.