ADVERTISEMENT

ಶಬರಿಮಲೆ: ಅಯ್ಯಪ್ಪನ ಚಿನ್ನದ ಮಾಳಿಗೆಯಲ್ಲಿ ಸೋರಿಕೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 1:03 IST
Last Updated 27 ಜುಲೈ 2022, 1:03 IST
ಕೇರಳದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನ
ಕೇರಳದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನ   

ಶಬರಿಮಲೆ (ಕೇರಳ): ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ, ಕೇರಳದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಗರ್ಭಗುಡಿಯ ಚಿನ್ನಲೇಪಿತ ಮಾಳಿಗೆ ಸೋರುತ್ತಿರುವುದು ಕಂಡು ಬಂದಿದೆ.

ದೇವಸ್ಥಾನದ ಉನ್ನತ ಸಮಿತಿಯಾದ ‘ತಿರುವಾಂಕೂರು ದೇವಸ್ವಂ ಮಂಡಳಿ’ಗೆ ಈ ಲೋಪ ಗಮನಕ್ಕೆ ಬಂದಿದ್ದು ಶೀಘ್ರದಲ್ಲೇ ಅದನ್ನು ಸರಿ ಮಾಡುವುದಾಗಿ ತಿಳಿಸಿದೆ.

ದೇವಸ್ಥಾನದ ಗರ್ಭಗುಡಿಯ ಎಡಮೂಲೆಯಲ್ಲಿ ಚಿನ್ನಲೇಪಿತ ಮಾಳಿಗೆಯಲ್ಲಿ ನೀರು ಸೋರುತ್ತಿರುವುದು ಕಂಡು ಬಂದಿದೆ. ಆಗಸ್ಟ್‌ 3 ರಂದು ಬಾಗಿಲು ತೆಗೆದು ಪರೀಕ್ಷೆ ಮಾಡಿದರೆ ಸೋರುವ ಪ್ರಮಾಣ ಎಷ್ಟು ಎಂದು ಗೊತ್ತಾಗಲಿದೆ ಎಂದು ಮಂಡಳಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.