ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವ ನಡೆಯುವ 2022ರ ವೇಳೆಗೆ ಸಾಮರ್ಥ್ಯ ವೃದ್ಧಿಗೆ ಪೂರಕವಾಗಿ ಪ್ರತಿ ಠಾಣೆಗೆ ಐದು ಗುರಿ ನಿಗದಿಪಡಿಸಬೇಕು ಎಂದು ದೆಹಲಿ ಪೊಲೀಸ್ ಇಲಾಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ.
ದೆಹಲಿ ಪೊಲೀಸ್ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕೋವಿಡ್ ಸಂದರ್ಭದಲ್ಲಿ ಹಾಗೂ ಕಳೆದ ವರ್ಷ ದೆಹಲಿಯಲ್ಲಿ ನಡೆದ ಗಲಭೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ ಶಾಂತಿ ನೆಲೆಸಲೂ ಸಿಬ್ಬಂದಿ ಕಾರಣರಾಗಿದ್ದಾರೆ ಎಂದು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಶಾ ಅವರು, ಗಣನೀಯ ಸೇವೆಗಾಗಿ ಕೆಲ ಸಿಬ್ಬಂದಿಗೆ ಸನ್ಮಾನಿಸಿದರು ಮತ್ತು ಕೋವಿಡ್ ಸಂದರ್ಭದಲ್ಲಿ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಗೆ ನಮನ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.