ADVERTISEMENT

ಶರದ್‌ ಪವಾರ್‌ ವಿರುದ್ಧ ಇ.ಡಿ ಪ್ರಕರಣ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 19:59 IST
Last Updated 24 ಸೆಪ್ಟೆಂಬರ್ 2019, 19:59 IST
   

ನವದೆಹಲಿ: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್‌ (ಎಂಎಸ್‌ಸಿಬಿ) ಹಗರಣ ಕುರಿತು ಜಾರಿ ನಿರ್ದೇಶನಾಲಯ ಎನ್‌ಸಿಎಫ್‌ ಮುಖ್ಯಸ್ಥ ಶರದ್‌ ಪವಾರ್ ಮತ್ತು ಅವರ ಸೋದರಳಿಯ ಅಜಿತ್ ಪವಾರ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿದೆ.

ಮುಂಬೈ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಹಣ ವರ್ಗಾವಣೆ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪ್ರಕರಣ ದಾಖಲಾಗಿರುವುದು ಗಮನಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT