ADVERTISEMENT

ಬಂಧನ ವಾರಂಟ್‌: ನ್ಯಾಯಾಲಯದ ಮೊರೆ ಹೋಗಲಿರುವ ತರೂರ್‌

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 19:56 IST
Last Updated 22 ಡಿಸೆಂಬರ್ 2019, 19:56 IST
ಶಶಿ ತರೂರ್‌
ಶಶಿ ತರೂರ್‌   

ತಿರುವನಂತಪುರ(ಪಿಟಿಐ): ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬಂಧನ ವಾರಂಟ್‌ ಹೊರಡಿಸಲಾಗಿದೆ ಎಂಬ ಸುದ್ದಿಯ ಕುರಿತು ಸ್ಪಷ್ಟನೆ ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗುವುದಾಗಿ ಸಂಸದ ಶಶಿ ತರೂರ್‌ ಭಾನುವಾರ ಹೇಳಿದ್ದಾರೆ.

1989ರಲ್ಲಿ ತರೂರ್‌ ಬರೆದಿರುವ ’ದಿ ಗ್ರೇಟ್‌ ಇಂಡಿಯನ್‌ ನಾವೆಲ್’ ಕೃತಿಯಲ್ಲಿ ನಾಯರ್‌ ಸಮುದಾಯದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಕೀಲೆ ಸಂಧ್ಯಾ ಎಂಬುವವರು ಪ್ರಕರಣ ದಾಖಲಿಸಿದ್ದರು.

ನ್ಯಾಯಾಲಯಕ್ಕೆ ಹಾಜರಾಗದ ಕಾರಣ ತರೂರ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಲಾಗಿದೆ ಎಂದು ದೂರುದಾರರಾದ ಸಂಧ್ಯಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.