ADVERTISEMENT

ಶಶಿ ತರೂರ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 19:41 IST
Last Updated 18 ಡಿಸೆಂಬರ್ 2019, 19:41 IST
ಶಶಿ ತರೂರ್‌
ಶಶಿ ತರೂರ್‌   

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಲೇಖಕ ಶಶಿ ತರೂರ್ ಮತ್ತು ಕವಿ, ನಾಟಕಕಾರ ನಂದ ಕಿಶೋರ್‌ ಆಚಾರ್ಯ ಸೇರಿದಂತೆ ವಿವಿಧ ಭಾಷೆಗಳ 23 ಲೇಖಕರು 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಶಿ ತರೂರು ಅವರ ಇಂಗ್ಲಿಷ್ ಕೃತಿ ‘ಆ್ಯನ್ ಎರಾ ಆಫ್ ಡಾರ್ಕ್‌ನೆಸ್‌’ ಮತ್ತು ನಂದ ಕಿಶೋರ್‌ ಆಚಾರ್ಯ ಅವರ ಹಿಂದಿ ಕವನ ಸಂಕಲನ ‘ಛೀಲಾತೆ ಹುಯೆ ಅಪ್ನೆ ಕೊ’ ಪ್ರಶಸ್ತಿಗೆ ಆಯ್ಕೆಯಾಗಿವೆ.

ಬುಧವಾರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಘೋಷಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.