ಬೆಂಗಳೂರು: ರಾಷ್ಟ್ರದಲ್ಲಿ ದ್ವೇಷ ಹರಡುವಿಕೆ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಮುರಿಯಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆಗ್ರಹಿಸಿದ್ದಾರೆ.
ದೇಶದ ಅಭಿವೃದ್ಧಿ ಹಾಗೂ ವಿದೇಶಗಳೊಂದಿಗಿನ ಉತ್ತಮ ಬಾಂಧವ್ಯವು ಇಂದು ಅಪಾಯದ ಸ್ಥಿತಿಯಲ್ಲಿರುವ ಬಗ್ಗೆ ನರೇಂದ್ರ ಮೋದಿ ಮಾತನಾಡಬೇಕು. ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಶಶಿ ತರೂರ್ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಧ್ರುವೀಕರಣ ಮತ್ತು ಪ್ರಗತಿಗಳ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವ ಸಂದರ್ಭ ಸನ್ನಿಹಿತವಾಗಿದೆ ಎಂದು ಶಶಿ ತರೂರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.