ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ, ವಿ.ಕೆ. ಶಶಿಕಲಾ ಅವರ ಕುಟುಂಬಕ್ಕೆ ಸೇರಿದ ಎರಡು ಐಶಾರಾಮಿ ಬಂಗಲೆಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಆದಾಯ ತೆರಿಗೆ ಇಲಾಖೆಯ ಬೇನಾಮಿ ಆಸ್ತಿ ತಡೆ ಘಟಕವು ಆರಂಭಿಸಿದೆ.
ನೀಲಗಿರಿಯ ಪ್ರದೇಶ, ನಗರದ ಹೊರವಲಯದಲ್ಲಿರುವ ಸುಮಾರು ₹2,000 ಕೋಟಿ ಮೌಲ್ಯದ ಈ ಬಂಗಲೆಗಳನ್ನು ವಶಪಡಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯು ಶಶಿಕಲಾ ಹಾಗೂ ಅವರ ಸಂಬಂಧಿಗಳಾದ ಇಳವರಸಿ, ಜಯಲಲಿತಾ ಅವರ ದತ್ತುಪುತ್ರ ವಿ.ಎನ್. ಸುಧಾಕರನ್ ಅವರಿಗೆ ನೋಟಿಸ್ ನೀಡಿದೆ. ‘1988ರ ಬೇನಾಮಿ ಆಸ್ತಿ ವಹಿವಾಟು ಕಾಯ್ದೆಯ ಸೆಕ್ಷನ್ 24(3)ರ ಅಡಿಯಲ್ಲಿ ಈ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ’ ಎಂದು ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತ ಯು.ಎನ್. ದಿಲೀಪ್ ಹೇಳಿದ್ದಾರೆ. ಜಯಲಲಿತಾ ಅವರ ಉತ್ತರಾಧಿಕಾರಿಗಳೆಂದು ಮೆಡ್ರಾಸ್ ಹೈಕೋರ್ಟ್ ಘೋಷಿಸಿರುವ ಜೆ. ದೀಪಾ ಹಾಗೂ ಜೆ. ದೀಪಕ್ ಅವರಿಗೂ ನೋಟಿಸ್ ಜಾರಿ ಮಾಡಿರುವುದು ವಿಶೇಷವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.