ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ನಾಯಕಿ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ.
‘ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಬಳಿಕ ಸೇನಾ ಪಡೆಗಳು ನಾಗರಿಕರಿಗೆ ಕಿರುಕುಳ ನೀಡುತ್ತಿವೆ. ಕಣಿವೆಯಲ್ಲಿ ಮನೆಗಳಲ್ಲಿ ದಾಂದಲೆ ನಡೆಸುತ್ತಿವೆ’ ಎನ್ನುವ ಅವರ ಟ್ವೀಟ್ಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿದೆ.
ಭಾರತೀಯ ಸೇನೆಯ ವರ್ಚಸ್ಸಿಗೆ ಕುಂದು ತರುವ ಉದ್ದೇಶದಿಂದ ಸುಳ್ಳು ಸುದ್ದಿ ಗಳನ್ನು ಪ್ರಸಾರ ಮಾಡು ತ್ತಿರುವ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.