ADVERTISEMENT

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರಬರಲು ಶಿರೋಮಣಿ ಅಕಾಲಿ ದಳ ನಿರ್ಧಾರ

ಏಜೆನ್ಸೀಸ್
Published 26 ಸೆಪ್ಟೆಂಬರ್ 2020, 17:31 IST
Last Updated 26 ಸೆಪ್ಟೆಂಬರ್ 2020, 17:31 IST
ಶಿರೋಮಣಿ ಅಕಾಲಿ ದಳದ ಸಭೆ–ಎಎನ್‌ಐ ಚಿತ್ರ
ಶಿರೋಮಣಿ ಅಕಾಲಿ ದಳದ ಸಭೆ–ಎಎನ್‌ಐ ಚಿತ್ರ   

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರಬರಲು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ನಿರ್ಧರಿಸಿದೆ.

ಕೃಷಿ ಮಸೂದೆಗೆ ಶಿರೋಮಣಿ ಅಕಾಲಿ ದಳ ವಿರೋಧ ವ್ಯಕ್ತಪಡಿಸಿದ್ದು, ಅದೇ ವಿಚಾರವಾಗಿ ಪಕ್ಷದ ನಾಯಕಿ ಹರ್ಸಿಮ್ರತ್‌ ಕೌರ್‌ ಕೇಂದ್ರ ಸಚಿವ ಸ್ಥಾನಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದರು.

ಎನ್‌ಡಿಎ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿರುವುದಾಗಿ ಪಕ್ಷದ ಅಧ್ಯಕ್ಷ ಸುಖ್ಬಿರ್‌ ಸಿಂಗ್‌ ಬಾದಲ್‌ ಶನಿವಾರ ಹೇಳಿದ್ದಾರೆ. ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.

ADVERTISEMENT

ರೈತರ ಬೆಳೆ ಕನಿಷ್ಠ ಬೆಂಬಲ ಬೆಲೆ ನಿಗದಿಯ ಬಗ್ಗೆ ಕೇಂದ್ರ ಸರ್ಕಾರ ಖಾತರಿ ನೀಡದಿರುವುದು ಹಾಗೂ ಪಂಜಾಬ್‌ ಮತ್ತು ಸಿಖ್‌ ಸಂಬಂಧಿತ ವಿಚಾರಗಳಲ್ಲಿ ಸೂಕ್ತ ಪ್ರತಿಕ್ರಿಯೆ ತೋರದ ಕಾರಣಗಳಿಂದಾಗಿ ಶಿರೋಮಣಿ ಅಕಾಲಿ ದಳ ಈ ನಿರ್ಧಾರ ಕೈಗೊಂಡಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಶಿವಸೇನಾ ಮತ್ತು ಟಿಡಿಪಿ ನಂತರ ಎನ್‌ಡಿಎ ಕೂಟದಿಂದ ಹೊರ ಬರುತ್ತಿರುವ ಪ್ರಮುಖ ಪಕ್ಷ ಎಸ್‌ಎಡಿ. ಇದು ಬಿಜೆಪಿಯ ಅತ್ಯಂತ ಹಳೆಯ ಮೈತ್ರಿ ಪಕ್ಷವೂ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.