ADVERTISEMENT

ಪಂಜಾಬ್‌ನಲ್ಲಿ ಶಿವಸೇನಾ ಮುಖಂಡನ ಗುಂಡಿಕ್ಕಿ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2022, 11:44 IST
Last Updated 4 ನವೆಂಬರ್ 2022, 11:44 IST
ಸುದೀರ್‌ ಸೂರಿ (ಟ್ವಿಟರ್‌ ಚಿತ್ರ: @SudhirKumarSuri)
ಸುದೀರ್‌ ಸೂರಿ (ಟ್ವಿಟರ್‌ ಚಿತ್ರ: @SudhirKumarSuri)   

ಅಮೃತಸರ: ಶಿವಸೇನಾ ಮುಖಂಡ ಸುಧೀರ್ ಸೂರಿ ಎಂಬುವವರನ್ನು ಪಂಜಾಬ್‌ನ ಅಮೃತಸರದಲ್ಲಿ ಶುಕ್ರವಾರ ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ.

ಸೂರಿ ಮತ್ತು ಪಕ್ಷದ ಇತರ ಕೆಲವು ಮುಖಂಡರು ಗೋಪಾಲ ಮಂದಿರದ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸೂರಿ ಮೇಲೆ ಗುಂಡಿನ ದಾಳಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದಾಳಿಕೋರನನ್ನು ಬಂಧಿಸಲಾಗಿದೆ. ಆತನಿಂದ ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪಂಜಾಬ್‌ನಲ್ಲಿ ಈ ಹಿಂದೆ ಗಾಯಕ, ಕಾಂಗ್ರೆಸ್‌ ಮುಖಂಡ ಸಿಧು ಮೂಸೆವಾಲ ಎಂಬುವವರನ್ನು ತಂಡವೊಂದು ಗುಂಡಿನ ದಾಳಿ ನಡೆಸಿ ಕೊಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.