ADVERTISEMENT

ರಾಜ್ಯಸಭೆ ಚುನಾವಣೆ: ಹೋಟೆಲ್‌ನಲ್ಲಿ ಶಿವಸೇನಾ ಶಾಸಕರ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 20:07 IST
Last Updated 6 ಜೂನ್ 2022, 20:07 IST
   

ಮುಂಬೈ: ಆಡಳಿತರೂಢ ಮೈತ್ರಿಕೂಟದ ಶಿವಸೇನೆಯ ಶಾಸಕರು ಮತ್ತು ಕೆಲ ಪಕ್ಷೇತರರು ಸೋಮವಾರ ಬಸ್‌ನಲ್ಲಿ ರೆಸಾರ್ಟ್‌ ವಾಸ್ತವ್ಯಕ್ಕೆ ತೆರಳಿದರು.

ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಯ ಆರು ಸ್ಥಾನಗಳಿಗೆ ಇದೇ 10ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಬಿಜೆಪಿಯು ಶಾಸಕರ ಖರೀದಿಗೆ ಮುಂದಾಗಬಹುದು ಎಂಬ ಸೂಚನೆ ಹಿನ್ನೆಲೆಯಲ್ಲಿ ಶಾಸಕರನ್ನು ರೆಸಾರ್ಟ್‌ಗೆ ಒಯ್ಯಲಾಗಿದೆ ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT