ನವದೆಹಲಿ:ಮುಂಬೈ ಮೂಲದ ಕಾಲ್ಸೆಂಟರ್ ಉದ್ಯೋಗಿ, ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೊಲೆ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ ಎಂದು ದೆಹಲಿ ಪೊಲೀಸರುಆರೋಪಿಯ ಕಸ್ಟಡಿ ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಈ ಮೊದಲು ವರದಿಯಾಗಿತ್ತು.
ದಕ್ಷಿಣ ದೆಹಲಿಯ ಮಹ್ರೌಲಿಯತನ್ನ ಫ್ಲ್ಯಾಟ್ನಲ್ಲಿ ಆಫ್ತಾಬ್ ಅಮೀನ್ಪೂನಾವಾಲಾ ಕಳೆದ ಮೇನಲ್ಲಿ ಶ್ರದ್ಧಾ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 300 ಲೀಟರ್ ಸಾಮರ್ಥ್ಯದ ಫ್ರಿಜ್ನಲ್ಲಿ ಸುಮಾರು ಮೂರು ವಾರಗಳವರೆಗೆ ಇರಿಸಿದ್ದ. ನಂತರ ಅವುಗಳನ್ನು ನಗರದ ವಿವಿಧೆಡೆ ಮತ್ತು ಛತರ್ಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳವರೆಗೆ ಒಂದೊಂದಾಗಿ ಬಿಸಾಡಿದ್ದ.
'ಸಿಟ್ಟಿನ ಭರದಲ್ಲಿ ಅಪರಾಧ ಎಸಗಿದೆ' ಎಂದು ಪೂನಾವಾಲ ಈಗಾಗಲೇ ಒಪ್ಪಿಕೊಂಡಿದ್ದಾನೆ.
ಇವನ್ನೂ ಓದಿ
*ಪ್ರೇಯಸಿ ಕೊಲೆಗೈದು, ದೇಹವನ್ನು 35 ತುಂಡುಗಳಾಗಿಸಿ ಎಸೆದವನ ಬಂಧನ!
*ಅಫ್ತಾಬ್ ಅಮೀನ್ ಯಾರು? ಇದೊಂದು ಲವ್ ಜಿಹಾದ್ ಪ್ರಕರಣವೇ?
*ಶ್ರದ್ಧಾ ಕೊಲೆ ಪ್ರಕರಣ: ಗಾಯದ ಚಿಕಿತ್ಸೆಗಾಗಿ ವೈದ್ಯರ ಬಳಿ ಹೋಗಿದ್ದ ಅಫ್ತಾಬ್
*ಶ್ರದ್ಧಾ ವಾಲ್ಕರ್ ಕೊಲೆ ಹಿಂದೆ ದೊಡ್ಡ ಷಡ್ಯಂತ್ರವಿದೆ: ಸ್ನೇಹಿತರಿಂದ ಶಂಕೆ
*ಶ್ರದ್ಧಾ ಕೊಲೆ ಪ್ರಕರಣ: ಗಾಯದ ಚಿಕಿತ್ಸೆಗಾಗಿ ವೈದ್ಯರ ಬಳಿ ಹೋಗಿದ್ದ ಅಫ್ತಾಬ್
*ದೇಶವನ್ನೇ ಬೆಚ್ಚಿ ಬೀಳಿಸಿದ ಹತ್ಯೆಗಳಿವು!
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.