ADVERTISEMENT

ದಕ್ಷಿಣದಲ್ಲಿನ ಬಿಜೆಪಿ ವಿರೋಧಿ ಅಲೆ ದೇಶದಾದ್ಯಂತ ವ್ಯಾಪಿಸಲಿ: ಸ್ಟಾಲಿನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮೇ 2023, 13:33 IST
Last Updated 20 ಮೇ 2023, 13:33 IST
ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಸ್ಟಾಲಿನ್.
ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಸ್ಟಾಲಿನ್.   

ಬೆಂಗಳೂರು: ಕರ್ನಾಟಕದ ನೂತನ ಮಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದು ಬಿಜೆಪಿ ವಿರೋಧಿ ಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು. ಕಾಂಗ್ರೆಸ್ ಪಕ್ಷದ ಆಹ್ವಾನದ ಮೇರೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಬಳಿಕ ಈ ಕುರಿತು ಟ್ವೀಟ್ ಮಾಡಿರುವ ಸ್ಟಾಲಿನ್, ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ADVERTISEMENT

ಈ ಜಾತ್ಯತೀತ ಜೋಡಿಯು ಸಮರ್ಥ ಆಡಳಿತದಿಂದ ಕರ್ನಾಟಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ನಾನು ಪ್ರಮಾಣಿಕವಾಗಿ ನಂಬುತ್ತೇನೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಭಾರತದಲ್ಲಿ ಎದ್ದಿರುವ ಈ ಅಲೆಯು ಭಾರತದ ಇತರೆ ಭಾಗಗಳಿಗೂ ಪಸರಿಸಬೇಕು. ಇಂದು ಬೆಂಗಳೂರಿನಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮವು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.