ADVERTISEMENT

ಸಿಎಂ ಭಗವಂತ ಮಾನ್‌ ಪ್ರತಿನಿಧಿಸುತ್ತಿದ್ದ ಸಂಗ್ರೂರ್‌ ಕ್ಷೇತ್ರದಲ್ಲಿ ಎಎಪಿಗೆ ಸೋಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2022, 10:15 IST
Last Updated 26 ಜೂನ್ 2022, 10:15 IST
ಭಗವಂತ ಮಾನ್‌
ಭಗವಂತ ಮಾನ್‌   

ನವದೆಹಲಿ: ಪಂಜಾಬ್‌ ಸಿಎಂ ಭಗವಂತ ಮಾನ್ ಅವರು ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಎಪಿ ಸೋಲು ಅನುಭವಿಸಿದೆ.

ಶಿರೋಮಣಿ ಅಕಾಲಿದಳದ ಸಿಮ್ರಂಜಿತ್ ಸಿಂಗ್ ಮಾನ್ ಅವರು ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಭಗವಂತ ಮಾನ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜೂನ್‌ 23 ರಂದು ಚುನಾವಣೆ ನಡೆದಿತ್ತು.

ADVERTISEMENT

ಆಮ್ ಆದ್ಮಿ ಪಕ್ಷದ ಗುರ್ಮೈಲ್ ಸಿಂಗ್ ಅವರನ್ನು ಸುಮಾರು 5,822 ಮತಗಳಿಂದ ಸಿಮ್ರಂಜಿತ್ ಸಿಂಗ್ ಮಾನ್ ಸೋಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.