ADVERTISEMENT

ಸಿಂಗಪುರ: ದೇವಸ್ಥಾನದ ಪ್ರಧಾನ ಅರ್ಚಕ ಬಂಧನ

ಚಿನ್ನಾಭರಣ ನಾಪತ್ತೆ

ಪಿಟಿಐ
Published 2 ಆಗಸ್ಟ್ 2020, 8:46 IST
Last Updated 2 ಆಗಸ್ಟ್ 2020, 8:46 IST

ಸಿಂಗಪುರ: ಇಲ್ಲಿನ ಮರಿಯಮ್ಮನ ದೇವಾಲಯದ ಪ್ರಧಾನ ಅರ್ಚಕರನ್ನು ಸಿಂಗಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಧಾನ ಅರ್ಚಕರ ಸುಪರ್ದಿಯಲ್ಲಿದ್ದ ಕೆಲ ಚಿನ್ನಾಭರಣಗಳು ನಾಪತ್ತೆಯಾಗಿದ್ದರಿಂದ ದೇವಸ್ಥಾನದ ಆಡಳಿತ ಮಂಡಳಿ ದೂರು ಸಲ್ಲಿಸಿತ್ತು.

ಪೂಜೆಯ ಸಮಯದಲ್ಲಿ ದೇವಿಯ ಶೃಂಗಾರಕ್ಕೆ ಚಿನ್ನಾಭರಣಗಳನ್ನು ಬಳಸಲಾಗುತ್ತದೆ. ಹಾಗಾಗಿ ಈ ಆಭರಣಗಳನ್ನು ಪ್ರಧಾನ ಅರ್ಚಕರಿಗೆ ನೀಡಲಾಗಿತ್ತು. ಆದರೆ, ಪರಿಶೀಲನೆ ಸಂದರ್ಭದಲ್ಲಿ ಕೆಲವು ಆಭರಣಗಳು ನಾಪತ್ತೆಯಾಗಿರುವುದು ತಿಳಿದು ಬಂದಿತ್ತು.

ADVERTISEMENT

‘ಈ ಪ್ರಕರಣದ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಧಾನ ಅರ್ಚಕರು ತಪ್ಪೊಪ್ಪಿಕೊಂಡಿದ್ದು, ನಾಪತ್ತೆಯಾಗಿದ್ದ ಚಿನ್ನಾಭರಣವನ್ನು ಹಿಂತಿರುಗಿಸದ್ದಾರೆ. ಈ ಪ್ರಕರಣದಲ್ಲಿ ಮತ್ತೊಬ್ಬರು ಭಾಗಿಯಾಗಿಲ್ಲ’ ಎಂದು ಮರಿಯಮ್ಮನ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.