ADVERTISEMENT

ಕೊಳದಲ್ಲಿ ಮುಳುಗಿ ಆರು ಮಕ್ಕಳು ಸಾವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 2:40 IST
Last Updated 10 ಅಕ್ಟೋಬರ್ 2022, 2:40 IST

ಗುರುಗ್ರಾಮ (ಪಿಟಿಐ): ಹರಿಯಾಣದ ಗುರುಗ್ರಾಮದಲ್ಲಿ ಮಳೆನೀರು ತುಂಬಿದ್ದ ಕೊಳದಲ್ಲಿ ಸ್ನಾನ ಮಾಡಲು ಭಾನುವಾರ ಮಧ್ಯಾಹ್ನ ಇಳಿದಿದ್ದ ಆರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದುಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರು 8ರಿಂದ 13 ವರ್ಷದೊಳಗಿನ ಬಾಲಕರು. ಶಂಕರ್‌ ವಿಹಾರ್‌ ಕಾಲೋನಿಯವರು.ಶವಗಳನ್ನು ಹೊರ ತೆಗೆಯಲಾಗಿದೆ. ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಮೃತ ಮಕ್ಕಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT