ADVERTISEMENT

₹5.38 ಕೋಟಿ ಮೌಲ್ಯದ ಚಿನ್ನ ಕಳ್ಳ ಸಾಗಣೆ ಯತ್ನ: ಆರು ಮಂದಿ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2022, 5:54 IST
Last Updated 11 ಸೆಪ್ಟೆಂಬರ್ 2022, 5:54 IST
ಐಎಎನ್‌ಎಸ್ ಚಿತ್ರ
ಐಎಎನ್‌ಎಸ್ ಚಿತ್ರ    

ನವದೆಹಲಿ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12 ಕೆ.ಜಿ. ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಇದರ ಒಟ್ಟು ಮೌಲ್ಯ ₹5.38 ಕೋಟಿ ಎಂದು ಅಂದಾಜಿಸಲಾಗಿದೆ. ಬಂಧಿತರಲ್ಲಿ ಸುಡಾನ್ ಪ್ರಜೆ ಸಹ ಸೇರಿದ್ದಾನೆ.

ವಿಶೇಷವಾಗಿ ವಿನ್ಯಾಸಗೊಳಿಸಲಾದ ಬೆಲ್ಟ್ ಮೂಲಕ ಸುಡಾನ್ ಪ್ರಜೆ ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿದ್ದಾನೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಲವು ಪ್ರಯಾಣಿಕರು ಆತನಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಲು ಗಲಾಟೆಯನ್ನು ಸೃಷ್ಟಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.

ಕಸ್ಟಮ್ಸ್ ಕಾಯ್ದೆ ಸೆಕ್ಷನ್ 110ರ ಅಡಿಯಲ್ಲಿ ಚಿನ್ನ ಕಳ್ಳ ಸಾಗಣೆ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.