ಸೂರ್ಯಪೇಟ್(ತೆಲಂಗಾಣ): ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದೆ.
ಹೈದರಾಬಾದ್ನಿಂದ 180 ಕಿ.ಮೀ ದೂರದ ಕೋದಾಡ್ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ.
ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ರಿಪೇರಿಗಾಗಿ ಟ್ರಕ್ ರಸ್ತೆ ಬಳಿ ನಿಲ್ಲಿಸಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎಂದು ಕೋದಾಡ್ ಡಿಎಸ್ಪಿ ಶ್ರೀಧರ್ ರೆಡ್ಡಿ ಹೇಳಿದ್ದಾರೆ.
ಬೆಳಗಿನ ಜಾವ ಸಂಭವಿಸಿದ ಅಪಘಾತದ ಸಂದರ್ಭ ಕಾರಿನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. 4 ಪ್ರಯಾಣಿಕರು ಸಣ್ಣ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.