ADVERTISEMENT

ಛತ್ತೀಸಗಡ–ತೆಲಂಗಾಣ ಗಡಿಯಲ್ಲಿ ಎನ್‌ಕೌಂಟರ್: ಆರು ನಕ್ಸಲರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2021, 6:11 IST
Last Updated 27 ಡಿಸೆಂಬರ್ 2021, 6:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯ್‌ಪುರ: ತೆಲಂಗಾಣ ಹಾಗೂ ಛತ್ತೀಸಗಡ ಗಡಿ ಪ್ರದೇಶದಲ್ಲಿರುವ ಕಿಸ್ತಾರಮ್ ಪಿಎಸ್‌ ಅರಣ್ಯ ವ್ಯಾಪ್ತಿಯಲ್ಲಿ ರಕ್ಷಣಾ ಪಡೆಗಳು ನಡೆಸಿದ ಎನ್‌ಕೌಂಟರ್‌ ವೇಳೆಆರು ನಕ್ಸಲರು ಹತರಾಗಿದ್ದಾರೆ.

'ಇದು ತೆಲಂಗಾಣ ಹಾಗೂ ಛತ್ತೀಸಗಡ ಪೊಲೀಸರು ಮತ್ತು ಸಿಆರ್‌ಪಿಎಫ್‌ ನಡೆಸಿದ ಜಂಟಿ ಕಾರ್ಯಾಚರಣೆಯಾಗಿದೆ. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಹುಡುಕು ಕಾರ್ಯಾಚರಣೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ' ಎಂದು ಭದ್ರಾದ್ರಿ ಕೊಥಾಗುಡೆಂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ದತ್ ತಿಳಿಸಿದ್ದಾರೆ.

ಸದ್ಯ ಕಾರ್ಯಾಚರಣೆ ಮುಂದುವರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.