ನವದೆಹಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ.
‘ರಾಜೇಂದ್ರ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದಿದ್ದಕ್ಕಾಗಿ ನಾನು ನಾಗರಿಕರಲ್ಲಿ ಕ್ಷಮೆ ಯಾಚಿಸುತ್ತೇನೆ. ಕೋವಿಡ್–19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಬಿಜೆಪಿ ಅಭ್ಯರ್ಥಿ ರಾಜೇಶ್ ಭಾಟಿಯಾಗೆ ಮತ ನೀಡಿ ಪಕ್ಷವನ್ನು ಗೆಲ್ಲಿಸುವಂತೆ ರಾಜೇಂದ್ರ ನಗರದ ಜನತೆಯಲ್ಲಿ ಮನವಿ ಮಾಡುತ್ತಿದ್ದೇನೆ’ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ದೆಹಲಿಯ ರಾಜೇಂದ್ರ ನಗರದಲ್ಲಿ ಉಪಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ರಾಜೇಶ್ ಭಾಟಿಯಾ ಕಣದಲ್ಲಿದ್ದಾರೆ. ಇವರ ಪರ ಪ್ರಚಾರಕ್ಕೆ ಇರಾನಿ ಭಾನುವಾರ ಅಲ್ಲಿಗೆ ತೆರಳಬೇಕಿತ್ತು.
ಇರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇದು ಎರಡನೇ ಬಾರಿ. 2020ರಲ್ಲಿಯೂ ಅವರು ಸೋಂಕಿತರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.