ADVERTISEMENT

ಉರಗ ತಜ್ಞ ವಾವಾ ಸುರೇಶ್‌ಗೆ ಹಾವು ಕಡಿತ: ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 18:37 IST
Last Updated 31 ಜನವರಿ 2022, 18:37 IST

ಕೊಟ್ಟಾಯಂ(ಕೇರಳ): ಕೇರಳ ರಾಜ್ಯದ ಪ್ರಸಿದ್ಧ ಉರಗ ತಜ್ಞ ವಾವಾ ಸುರೇಶ್ ಅವರಿಗೆ ನಾಗರ ಹಾವು ಕಚಿದ್ದುಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಅವರ ಆರೋಗ್ಯ ಗಂಭೀರವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸೋಮವಾರ ಕೊಟ್ಟಾಯಂಸಮೀಪದ ಹಳ್ಳಿಯೊಂದರಲ್ಲಿಹಾವನ್ನು ಹಿಡಿಯುವಾಗ ಅವರಿಗೆ ಹಾವು ಕಡಿದಿದೆ.

ADVERTISEMENT

ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.