ADVERTISEMENT

ಕೇದಾರನಾಥದಲ್ಲಿ ಹಿಮಪಾತ, ಹವಾಮಾನ ಮುನ್ಸೂಚನೆ ಅನುಸರಿಸಲು ಯಾತ್ರಾರ್ಥಿಗಳಿಗೆ ಸೂಚನೆ

ಪಿಟಿಐ
Published 14 ಮೇ 2023, 10:51 IST
Last Updated 14 ಮೇ 2023, 10:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರುದ್ರಪ್ರಯಾಗ: ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ಹಿಮಪಾತವಾಗಿದ್ದು, ಹವಾಮಾನ ಮುನ್ಸೂಚನೆಗೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ದೇವಸ್ಥಾನಕ್ಕೆ ಭೇಟಿ ನೀಡಲು ಬರುವ ಯಾತ್ರಾರ್ಥಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳು ಕೊಡೆ, ರೈನ್‌ಕೋಟ್‌ಗಳು ಮತ್ತು ಅಗತ್ಯ ಔಷಧಗಳನ್ನು ಕೊಂಡೊಯ್ಯುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ದೇವಾಲಯದ ಮೇಲೆ ಹಿಮ ಬೀಳುತ್ತಿರುವ ವಿಡಿಯೊ ಕ್ಲಿಪ್ ಅನ್ನು ಪೊಲೀಸ್ ಸೂಪರಿಂಟೆಂಡೆಂಟ್ (ರುದ್ರಪ್ರಯಾಗ) ವಿಶಾಖ ಅಶೋಕ್ ಭದನೆ ಅವರು ಬಿಡುಗಡೆ ಮಾಡಿದ್ದಾರೆ.

ADVERTISEMENT

ಕೇದಾರನಾಥ ಮತ್ತು ಬದರಿನಾಥದಲ್ಲಿ ಮೇ ತಿಂಗಳಲ್ಲಿ ಆಗಾಗ್ಗೆ ಹಿಮ ಬೀಳುತ್ತಿದ್ದು, ಇದು ಅಸಾಮಾನ್ಯ ಹವಾಮಾನ ವಿದ್ಯಮಾನವಾಗಿದೆ. ಹಿಮಪಾತವಿದ್ದರೂ ದೇಗುಲಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ.

ಚಾರ್ ಧಾಮ್ ಯಾತ್ರೆ ಆರಂಭವಾದ ಒಂದು ತಿಂಗಳೊಳಗೆ ಈ ಎರಡು ದೇವಾಲಯಗಳಿಗೆ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಭೇಟಿ ನೀಡಿದ್ದಾರೆ.

ಏಪ್ರಿಲ್ 25 ರಿಂದ ಕೇದಾರನಾಥ ಮತ್ತು ಏಪ್ರಿಲ್ 27 ರಿಂದ ಬದರಿನಾಥ ದೇವಾಲಯಗಳು ಭಕ್ತರ ದರ್ಶನಕ್ಕಾಗಿ ತೆರೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.