ADVERTISEMENT

ಪಾಕ್‌ ಗುಂಡಿನ ದಾಳಿಗೆ ಭಾರತೀಯ ಯೋಧ ಬಲಿ

ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಘಟನೆ

ಪಿಟಿಐ
Published 21 ನವೆಂಬರ್ 2020, 7:08 IST
Last Updated 21 ನವೆಂಬರ್ 2020, 7:08 IST
ಸಿಆರ್‌ಪಿಎಫ್‌ ಯೋಧರ ಪ್ರಾತಿನಿಧಿಕ ಚಿತ್ರ (ಪಿಟಿಐ)
ಸಿಆರ್‌ಪಿಎಫ್‌ ಯೋಧರ ಪ್ರಾತಿನಿಧಿಕ ಚಿತ್ರ (ಪಿಟಿಐ)   

ಜಮ್ಮು: ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ಶನಿವಾರ ಬೆಳಿಗ್ಗೆ ಪಾಕಿಸ್ತಾನದ ರಕ್ಷಣಾ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ರಕ್ಷಣಾಪಡೆಯ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.

ನೌಶೇರಾ ಸೆಕ್ಟರ್‌ನಲ್ಲಿ ಲ್ಯಾಮ್‌ ಪ್ರದೇಶದಲ್ಲಿರುವ ಗಡಿಯುದ್ದಕ್ಕೂ ಪಾಕಿಸ್ತಾನ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ಘಟನೆಯಲ್ಲಿ ಹವಲ್ದಾರ್ ಒಬ್ಬರು ತೀವ್ರವಾಗಿ ಗಾಯಗೊಂಡು, ನಂತರ ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆಯು ತೀವ್ರವಾಗಿ ಪ್ರತೀಕಾರ ತೀರಿಸಿತು. ಎರಡೂ ದೇಶಗಳ ನಡುವೆ ಸ್ವಲ್ಪ ಸಮಯದವರೆಗೆ ಗಡಿಯಾಚೆಗೆ ಗುಂಡಿನ ದಾಳಿ ಮುಂದುವರೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.