ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಪಾಕಿಸ್ತಾನ ಸೇನೆಯು ಬುಧವಾರ ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರ ತಿಳಿಸಿದರು.
ರಾಜಸ್ಥಾನದ ಜೋಧ್ಪುರನ ನಿವಾಸಿ ಸಿಪಾಯಿ ಲಕ್ಷ್ಮಣ್ ಅವರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದಾಗಿ ಈ ವರ್ಷ ಒಟ್ಟು ನಾಲ್ವರು ಸೈನಿಕರು ಸಾವಿಗೀಡಾಗಿದ್ದಾರೆ.
‘ಸುಂದರ್ಬನಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿ ವೇಳೆ ಲಕ್ಷ್ಮಣ್ ಗಂಭೀರವಾಗಿ ಗಾಯಗೊಂಡಿದ್ದರು’ ಎಂದು ವಕ್ತಾರರು ಮಾಹಿತಿ ನೀಡಿದರು.
‘ಸಿಪಾಯಿ ಲಕ್ಷ್ಮಣ್ ಅವರು ಧೈರ್ಯಶಾಲಿ ಮತ್ತು ಪ್ರಾಮಾಣಿಕ ಸೈನಿಕರಾಗಿದ್ದರು. ಅವರ ತ್ಯಾಗಕ್ಕೆ ದೇಶ ಸದಾ ಋಣಿಯಾಗಿದೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.