ನವದೆಹಲಿ: ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂದನಕ್ಕೊಳಗಾಗಿರುವಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನು ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿತಿಹಾರ್ ಜೈಲಿನಲ್ಲಿ ಬುಧವಾರ ಭೇಟಿಯಾದರು.
ಬೆಳಗ್ಗೆ 8.15 ನಿಮಿಷಕ್ಕೆ ಸರಿಯಾಗಿ ತಿಹಾರ್ ಜೈಲು ಬಳಿಗೆ ಆಗಮಿಸಿದ ಸೋನಿಯಾಗಾಂಧಿ ಡಿ.ಕೆ ಶಿವಕುಮಾರ್ ಅವರನ್ನು ಕಂಡರು ಎಂದು ಹೇಳಲಾಗಿದೆ. ಅವರೊಂದಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ.ವೇಣುಗೋಪಾಲ್ ಅವರೂ ಇದ್ದರೆನ್ನಲಾಗಿದೆ.
ಕಳೆದ ಹದಿನೈದು ದಿನಗಳ ಹಿಂದೆ ತಿಹಾರ್ ಜೈಲಿಗೆ ಭೇಟಿ ನೀಡಿದ್ದ ಸೋನಿಯಾ ಗಾಂಧಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನಷ್ಟೇ ಭೇಟಿಯಾಗಿದ್ದರು. ಆದರೆ, ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿರಲಿಲ್ಲ.
ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮಂಗಳವಾರ ತಿಹಾರ್ ಜೈಲಿಗೆ ತೆರಳಿ ಡಿಕೆಶಿ ಅವರನ್ನು ಭೇಟಿಯಾಗಿದ್ದರು.
ಇಂದು ಜಾಮೀನು ಅರ್ಜಿಯ ತೀರ್ಪು
ಇಡಿ ಬಂಧನದಲ್ಲಿರುವ ಡಿ.ಕೆ ಶಿವಕುಮಾರ್ ಅವರು ಜಾಮೀನು ಕೋರಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಂಡಿದೆ. ಇಂದು ಅದರ ತೀರ್ಪು ಹೊರಬೀಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.