ADVERTISEMENT

ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸಾಧನೆ ನಿರಾಶಾದಾಯಕ: ಸೋನಿಯಾ ಗಾಂಧಿ

ಚುನಾವಣೆಗಳ ಸೋಲಿನ ಪರಾಮರ್ಶೆಗೆ ಶೀಘ್ರ ಸಿಡಬ್ಲ್ಯುಸಿ ಸಭೆ

ಪಿಟಿಐ
Published 7 ಮೇ 2021, 8:30 IST
Last Updated 7 ಮೇ 2021, 8:30 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಸಾಧನೆ ಬಹಳ ನಿರಾಶಾದಾಯಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿಪ್ರಾಯಪಟ್ಟರು.

ಪ‍ಕ್ಷದ ಎಲ್ಲ ಸಂಸದರೊಂದಿಗೆ ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿನ ಹಿನ್ನಡೆಯಿಂದ ಪಕ್ಷದ ಸದಸ್ಯರು ನಮ್ರತೆ ಮತ್ತು ಪ್ರಾಮಾಣಿಕ ಮನೋಭಾವದಿಂದ ಪಾಠ ಕಲಿಯಬೇಕು‘ ಎಂದು ಅವರು ಹೇಳಿದ್ದಾರೆ.

‘ವಿಧಾನಸಭಾ ಚುನಾವಣಾ ಫಲಿತಾಂಶಗಳ ಪರಾಮರ್ಶೆಗೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಸೇರಲಿದೆ‘ ಎಂದು ಅವರು ತಿಳಿಸಿದರು.

ADVERTISEMENT

ಇದೇ ವೇಳೆ ಸಭೆಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣೆಯಲ್ಲಿ ಜಯಗಳಿಸಿದ ಮಮತಾ ಬ್ಯಾನರ್ಜಿ, ಎಂ. ಕೆ.ಸ್ಟಾಲಿನ್ ಮತ್ತು ಎಡಪಕ್ಷಗಳನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.