ನವದೆಹಲಿ: ವಿಶೇಷ ಸುರಕ್ಷತಾ ಪಡೆ (ಎಸ್ ಪಿಜಿ)ಭದ್ರತೆ ಹಿಂಪಡೆದ ಕೇಂದ್ರದ ಕ್ರಮದ ಕುರಿತು ಯಾವುದೇ ಪ್ರತಿಕ್ರಿಯೆ ನೀಡದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಇಲ್ಲಿಯವರೆಗೆ ತಮ್ಮ ಕುಟುಂಬವನ್ನು ರಕ್ಷಿಸಿದ ಸಿಬ್ಬಂದಿಗೆ ಕೃತಜ್ಞತೆ ಅರ್ಪಿಸುತ್ತೇನೆ ಎಂದು ಎಸ್ಪಿಜಿ ಮುಖ್ಯಸ್ಥರಿಗೆ ತಿಳಿಸಿದ್ದಾರೆ.
ಶನಿವಾರ ಎಸ್ಪಿಜಿ ಮುಖ್ಯಸ್ಥ ಅರುಣ್ ಸಿನ್ಹಾ ಅವರಿಗೆ ಈ ಸಂಬಂಧ ಪತ್ರ ಬರೆದಸೋನಿಯಾಗಾಂಧಿ,ಕಳೆದ 28 ವರ್ಷಗಳಿಂದಇಲ್ಲಿಯವರೆಗೆ ಪ್ರತಿದಿನ ನಮ್ಮ ಕುಟುಂಬವನ್ನು ರಕ್ಷಿಸಿದ ತಮ್ಮ ಸಿಬ್ಬಂದಿಗೆ ಕುಟುಂಬದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಎಸ್ಪಿಜಿ ಪಡೆ ದೇಶದ ಒಂದು ಅತ್ಯುತ್ತಮ ಭದ್ರತಾ ಪಡೆಯಾಗಿದ್ದು, ಎಸ್ ಪಿಜಿ ಪಡೆಯ ಪ್ರತಿಯೊಬ್ಬರಲ್ಲೂ ಧೈರ್ಯ ಮತ್ತು ದೇಶಭಕ್ತಿ ತುಂಬಿದೆ.ಎಸ್ಪಿಜಿ ಸಿಬ್ಬಂದಿಯ ವೃತ್ತಿಪರತೆ, ಆತ್ಮವಿಶ್ವಾಸ, ಸಮರ್ಪಣಾ ಮನೋಭಾವ, ವಿವೇಚನೆ ನಿಜಕ್ಕೂ ಮೆಚ್ಚುವಂತಹದ್ದು. ದಿನದ ಪ್ರತಿಯೊಂದು ಹಂತದಲ್ಲೂ ಅವರು ನಮ್ಮ ಕುಟುಂಬದ ರಕ್ಷಣೆಯನ್ನು ನೋಡಿಕೊಂಡಿದ್ದಾರೆ. ಇದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಹಾಗೂನನ್ನ ಕುಟುಂಬದ ಪರವಾಗಿ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.