ಲಖನೌ:ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಉತ್ತರ ಪ್ರದೇಶದ ನೂತನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ತಮ್ಮಪಕ್ಷಅಧಿಕಾರದಲ್ಲಿದ್ದಾಗ ನಿರ್ಮಿಸಿದ ಕ್ರೀಡಾಂಗಣದಲ್ಲಿ ಬಿಜೆಪಿಯ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಅವರು ಗೇಲಿ ಮಾಡಿದ್ದಾರೆ.
ಲಖನೌದ'ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂ'ನಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸ್ಟೇಡಿಯಂ ಪ್ರವೇಶಕ್ಕೆ50,000 ಜನರಿಗೆ ಅವಕಾಶ ಕಲ್ಪಿಸಲಾಗಿತ್ತು.
'ಸಮಾಜವಾದಿ ಪಕ್ಷ ನಿರ್ಮಿಸಿರುವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಪ್ರಮಾಣ ವಚನಎಂಬುದು ಕೇವಲ ಸರ್ಕಾರ ರಚಿಸಲು ಮಾತ್ರವೇ ಅಲ್ಲ, ನಿಜವಾದ ಅರ್ಥದಲ್ಲಿ ಜನರ ಸೇವೆ ಮಾಡಲು ಕೂಡ ಆಗಿರಬೇಕು' ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಅವರು ಟ್ವೀಟ್ ಮಾಡಿ ಹೇಳಿದ್ದಾರೆ.
ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದರು. ನಂತರ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.